This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಮಾಧ್ಯಮ ಅಕಾಡೆಮಿ-ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತರಿಂದ ಲೇಖನ ಆಹ್ವಾನ

Join The Telegram Join The WhatsApp

ಬೆಳಗಾವಿ : 

ಕರ್ನಾಟಕ ಮಾಧ್ಯಮ ಅಕಾಡೆಮಿ 2022 ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆ ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ತಲಾ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ಸಂಸ್ಥೆಗಳು ಒಂದು ಲಕ್ಷ ರೂ.ಗಳ ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ.

2022 ಜನವರಿ ಯಿಂದ ನವೆಂಬರ್-2022 ರವರೆಗೆ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳನ್ನು ಅಭಿಮಾನಿ ಪ್ರಶಸ್ತಿ-2022 ಎಂದು ದಾಖಲಿಸಿ ಹಾಗೂ ಇದೇ ಅವಧಿಯ ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳನ್ನು ಮೈಸೂರು ದಿಗಂತ ಪ್ರಶಸ್ತಿ-2022 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

ಕನ್ನಡ ದೈನಿಕ–ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ-ವರದಿಗಳನ್ನು ಡಿಸೆಂಬರ್-31 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಭಿಮಾನಿ ಪ್ರಶಸ್ತಿ-2022, ಹಾಗೂ ಮೈಸೂರು ದಿಗಂತ ಪ್ರಶಸ್ತಿ-2022 ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ. ಆರ್. ಅಂಬೇಡ್ಕರ್ ವೀದಿ, ಬೆಂಗಳೂರು ಇವರಿಗೆ ಕಳುಹಿಸಲು ಅಕಾಡೆಮಿ ಅಧ್ಯಕ್ಷ ಕೆ. ಸದಾಶಿವ ಶೆಣೈ ಕೋರಿದ್ದಾರೆ.


Join The Telegram Join The WhatsApp
Admin
the authorAdmin

Leave a Reply