Join The Telegram | Join The WhatsApp |
ಮುಂಬೈ:
ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದ ಮಧ್ಯೆ ಶಿವಸೇನಾ (ಯುಬಿಟಿ) ನಾಯಕ ಸಂಜಯ ರಾವತ್ ಬುಧವಾರ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂದು ಬುಧವಾರ ಒತ್ತಾಯಿಸಿದ್ದಾರೆ ಮತ್ತು ದೆಹಲಿಯ ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ಹಿಂಸಾಚಾರದ ಘಟನೆಗಳು ನಡೆಯುವುದಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಂತಹ ದಾಳಿಗಳನ್ನು ಎದುರಿಸಲು ರಾಜ್ಯ ಸರ್ಕಾರ ದುರ್ಬಲ ಮತ್ತು ಅಸಹಾಯಕವಾಗಿದೆ ಎಂದು ಹೇಳಿದರು.
ಕರ್ನಾಟಕದ ಯಾವುದೇ ಮುಖ್ಯಮಂತ್ರಿಗಳು ಸೋಲಾಪುರ ಮತ್ತು ಸಾಂಗ್ಲಿಯಲ್ಲಿ (ಗ್ರಾಮಗಳಲ್ಲಿ) ಹಕ್ಕು ಸಾಧಿಸಿದ ಕಾರಣ ಮಹಾರಾಷ್ಟ್ರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯ ಟೋಲ್ ಬೂತ್ ಬಳಿ ಮಹಾರಾಷ್ಟ್ರ ಕಡೆಯಿಂದ ಕರ್ನಾಟಕಕ್ಕೆ ಪ್ರವೇಶಿಸುವ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು.
ಇದಕ್ಕೆ ಪ್ರತಿಯಾಗಿ ಪುಣೆ ಜಿಲ್ಲೆಯಲ್ಲಿ ಕರ್ನಾಟಕದ ಕನಿಷ್ಠ ನಾಲ್ಕು ಬಸ್ಗಳನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಬಣ್ಣ ಹಚ್ಚು ವಿರೂಪಗೊಳಿಸಲಾಗಿದೆ.
ಬುಧವಾರ ಟ್ವೀಟ್ ಮಾಡಿರುವ ರಾವತ್ ಅವರು ಮರಾಠಿ ಜನರು ಮತ್ತು ಮಹಾರಾಷ್ಟ್ರದ ವಾಹನಗಳ ಮೇಲೆ “ದೆಹಲಿಯ ಬೆಂಬಲ”ವಿಲ್ಲದೆ ಬೆಳಗಾವಿಯಲ್ಲಿ ದಾಳಿ ಮಾಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅದರ ಬೆನ್ನೆಲುಬು ಮುರಿದು ಮರಾಠಿ ಸ್ವಾಭಿಮಾನ ಕೊನೆಗಾಣಿಸುವ ಆಟ ಶುರುವಾಗಿದೆ. ಬೆಳಗಾವಿಯಲ್ಲಿ ನಡೆದ ದಾಳಿಯೂ ಇದೇ ಸಂಚಿನ ಭಾಗವಾಗಿದೆ ರಾವತ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಮತ್ತು ಸುತ್ತಮುತ್ತಲಿನ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು. ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಧೈರ್ಯವಿದ್ದರೆ ವಿವಾದಿತ ಪ್ರದೇಶಗಳನ್ನು ಕೂಡಲೇ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಬೇಕು.ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ನೇತೃತ್ವದಲ್ಲಿ ಜನರು ಬೆಳಗಾವಿಗೆ ಹೋಗಲು ಸಿದ್ಧರಾಗಿದ್ದಾರೆ ಎಂದು ರಾವತ್ ಹೇಳಿದರು.
ಏನಾಗುತ್ತಿದೆ ಎಂದು ನಮಗೆ ತಿಳಿದಿಲ್ಲವೇ? ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಕರ್ನಾಟಕದಲ್ಲಿ ಮತ್ತು ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಸರ್ಕಾರವಿದೆ ಎಂದು ರಾವತ್ ಹೇಳಿದರು.
ಒಂದು ದಿನದ ಹಿಂದೆ, ಪವಾರ್ ಅವರು ಮತ್ತು ಅವರ ಸಹಚರರು ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರಿಗೆ ವಿಶ್ವಾಸ ನೀಡಲು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿದ್ದರು.
Join The Telegram | Join The WhatsApp |