ಬೆಳಗಾವಿ : ಕಾಡುಕೋಣ ತಿವಿದು ವೃದ್ದೆ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಖಾನಾಪುರ ತಾಲೂಕಿನ ಅಮಟೆ ಗ್ರಾಮದ ಹೊರವಲಯದ ಬಳಿ ಈ ದುರ್ಘಟನೆ ನಡೆದಿದೆ. ಸರಸ್ವತಿ ಅರ್ಜುನ ಗಾವಡೆ (80) ಮೃತಪಟ್ಟವರು. ಅವರು ಮನೆಯಿಂದ ತಮ್ಮ ಹೊಲದ ಗೋಡಂಬಿ ಬೀಜಗಳನ್ನು ಕೀಳಲು ಹೋದಾಗ ಹಠಾತ್ ದಾಳಿ ನಡೆಸಿದ ಕಾಡುಕೋಣ ಅವರ ಹೊಟ್ಟೆಯ ಭಾಗಕ್ಕೆ ತಿವಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.