ಲಖನೌ: ಬ್ಯಾಲೆಸ್ಟ್‌ ಕಲ್ಲುಗಳು ತುಂಬಿದ್ದ ಲಾರಿ ಬಸ್ ಮೇಲೆ
ಉರುಳಿದ ಪರಿಣಾಮ 11 ಮಂದಿ ಮೃತಪಟ್ಟು, 10 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ, ರಾತ್ರಿ 11 ಗಂಟೆ ಸುಮಾರಿಗೆ ಖುತಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಹೆದ್ದಾರಿಯ ಪಕ್ಕದಲ್ಲಿರುವ ಡಾಬಾದ ಬಳಿ ಉತ್ತರಾಖಂಡಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಬ್ಯಾಲೆಸ್ಟ್ ಕಲ್ಲುಗಳು ತುಂಬಿದ್ದ ಲಾರಿ ಉರುಳಿದೆ.

ಘಟನೆ ನಡೆದ ವೇಳೆ ಕೆಲವರು ಬಸ್‌ನಲ್ಲಿದ್ದರು ಮತ್ತು ಇನ್ನೂ ಕೆಲವರು ಡಾಬಾದಲ್ಲಿ ಊಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಧಿಕಾರಿಗಳು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.