This is the title of the web page
This is the title of the web page

Live Stream

June 2023
S M T W T F S
 123
45678910
11121314151617
18192021222324
252627282930  

| Latest Version 9.4.1 |

State News

30 ಲಕ್ಷ ರೂ ವೆಚ್ಚದ ಸಮುದಾಯ ಭವನ ಕಾಮಗಾರಿಗೆ ಚಾಲನೆ ನೀಡಿದ ಮಹೇಶ ಕುಮಠಳ್ಳಿ

Join The Telegram Join The WhatsApp

 

 

ಅನಿವಾರ್ಯ ಕಾರಣದಿಂದ ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು ಗೋಕಾಕನಲ್ಲೇ ಶಂಕು ಸ್ಥಾಪನೆ

ರಡ್ಡೆರಹಟ್ಟಿ :

ರಡ್ಡೆರಹಟ್ಟಿ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದ ವಿಠ್ಠಲ ರುಕ್ಮಿಣಿ ದೇವಸ್ಥಾನದ ಸಮುದಾಯ ಭವನ ಕಾಮಗಾರಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ ನೀಡಿದರು.

ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಾರ್ಚ್ 28ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಅದನ್ನು ಉದ್ಘಾಟನೆ ಮಾಡಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆದರೆ ಅನಿವಾರ್ಯ ಕಾರಣದಿಂದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತಿಗಳು ಗೋಕಾಕನಲ್ಲೇ ಶಂಕು ಸ್ಥಾಪನೆ ಮಾಡುತ್ತಾರೆ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದ್ದಾರೆ.ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಅಮ್ಮಾಜೇಶ್ವರಿ ಏತ ನೀರಾವರಿ ಮಂಜೂರಾತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿಯವರ ಸಹಕಾರವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದರು.

ಗ್ರಾಮದ ಪ್ರಮುಖರಾದ ಬಸಪ್ಪ ಚನ್ನಾಪುರ, ಪಾಂಡು ಬೋಸಲೇ, ಸಹದೇವ ಅರಾಗೋಡ್ಡಿ, ನಿಂಗಪ್ಪ ಖೋತ, ಅಣ್ಣಪ್ಪ ಕಿತ್ತೂರ, ಶಿವಾನಂದ ಗಲಗಲಿ, ಮುಕೇಶ ಬೋಸಲೇ ಹಾಗೂ ಇನ್ನು ಹಲವಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Join The Telegram Join The WhatsApp
Admin
the authorAdmin

Leave a Reply