ಬೆಳಗಾವಿ: ನಿಪ್ಪಾಣಿಯ ಜತ್ರಾಟ್ ವೇಸ್ ನಲ್ಲಿ ಮನೆಯ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಿರುಪತಿ ಹತ್ಕಾರ್ (45)ಮೃತಪಟ್ಟವರು. ತಗಡಿನ ಶೆಡ್ ನಲ್ಲಿ ಮಲಗಿದ್ದ ವೇಳೆ ಮಳೆಯಿಂದ ಪಕ್ಕದ ಮನೆಯ ಗೋಡೆ ಕುಸಿದು ಮೃತಪಟ್ಟಿದ್ದಾರೆ. ತಹಸೀಲ್ದಾರ ಮತ್ತು ಉಪ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು ನಿಪ್ಪಾಣಿ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.