ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ ಅಷ್ಟೇ ಅಲ್ಲ, ಮಂಜುನಾಥ ಹೆಸರಿನ ಇನ್ನೂ ನಾಲ್ವರು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ!

ಈ ಹಿಂದೆಯೇ ಘೋಷಣೆ ಮಾಡಿದ್ದಂತೆ ಬಹುಜನ್ ಭಾರತ ಪಾರ್ಟಿ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ, ಜತೆಗೆ ಇದೀಗ ಪಕೇತರರಾಗಿ ಸಿ.ಮಂಜುನಾಥ, ಎನ್‌.ಮಂಜುನಾಥ, ಕೆ.ಮಂಜುನಾಥ ಕೂಡ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಸಿ.ಎನ್. ಮಂಜುನಾಥ
ಹೆಸರಿನ ಅಭ್ಯರ್ಥಿಯನ್ನು ಹಾಸನದಿಂದ ಕರೆತಂದು ಇಲ್ಲಿ ಕಣಕ್ಕಿಳಿಸುತ್ತಿದ್ದಾರೆಂಬ ಆರೋಪವನ್ನು ಬಹುಜನ್ ಭಾರತ್ ಪಾರ್ಟಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ತಳ್ಳಿಹಾಕಿದ್ದಾರೆ. ಕಾಂಗ್ರೆಸ್‌ನವರ ಬಳಿ ನಾನು ಅರ್ಧ ಕಪ್ ಕಾಫಿ ಸಹಾ ಕುಡಿದಿಲ್ಲ, ಅವರು ಯಾರೂ ನಮ್ಮನ್ನು ಭೇಟಿ ಮಾಡಿಲ್ಲ. ಬೇಕಾದರೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದು ನೋಡಲಿ ಎಂದು ಹೇಳಿದ್ದಾರೆ. ನಾನು ಹಾಸನ ಜಿಲ್ಲೆ ಚನ್ನರಾಯ
ಪಟ್ಟಣ ತಾಲೂಕಿನವನು. ಹಾಸನದಲ್ಲಿ ನಮ್ಮ ಪಕ್ಷದಿಂದ ಬೇರೆಯವರು ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಅವಕಾಶ ಸಿಗದ ಕಾರಣ ಇಲ್ಲಿಂದ ಸ್ಪರ್ಧೆ ಮಾಡುತ್ತಿದ್ದೇನೆ.

ಡಾ.ಸಿ.ಎನ್.ಮಂಜುನಾಥ ಅವರ ಪರ ಇರುವ ಮತದಾರರಲ್ಲಿ ಗೊಂದಲ ಮೂಡಿಸಲು ಕಾಂಗ್ರೆಸ್‌ನವರೇ ಅದೇ ಹೆಸರಿನವರನ್ನು ಕರೆ ತಂದು ನಿಲ್ಲಿಸುವ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.