ರಾಯಚೂರು: ಜಿಲ್ಲೆಯಲ್ಲಿ ರಣ ಬಿಸಿಲು ರೆಕ್ಕೆ ಬಿಚ್ಚಿಕೊಂಡಿದ್ದು, ಬಿಸಿಲಿನ ಧಗೆ ಹೆಚ್ಚಾಗಿದೆ. ಬುಧವಾರ ಗರಿಷ್ಠ 42.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಬಿಸಿಲಿನ ಝಳಕ್ಕೆ ಜನ ಮಧ್ಯಾಹ್ನದ ವೇಳೆ ಮನೆಗಳಿಂದ ಹೊರಗೆ ಬರಲು ಹಿಂಜರಿಯುತ್ತಿದ್ದಾರೆ. ಮಾರುಕಟ್ಟೆ ಪ್ರದೇಶ ಜನರಿಲ್ಲದೇ ಬಿಕೋ ಎನ್ನುತ್ತಿದೆ. ಬೆಳಗಿನ ವಾಯುವಿಹಾರ ಹಾಗೂ ಸಂಜೆ ಮಾತ್ರ ಮಾರುಕಟ್ಟೆ ಪ್ರದೇಶದಲ್ಲಿ ಜನ ಕಾಣಿಸಿಕೊಳ್ಳುತ್ತಿದ್ದಾರೆ.j