Join The Telegram | Join The WhatsApp |
ಬೆಂಗಳೂರು: ಇದೇ ಮೊದಲ ಬಾರಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರುಗಳಿಗೆ ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರಕಾರವು ನಿರ್ಧರಿಸಿದೆ. ಈ ಸಂಬಂಧವಾಗಿ ದಿನಾಂಕ 14-12-2022ರಂದು ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರದ ಈ ನಿರ್ಧಾರದಿಂದ 274 ಸಹ ಪ್ರಾಧ್ಯಾಪಕರಿಗೆ ಮುಂಬಡ್ತಿ ಸಿಗಲಿದೆ.
ಉನ್ನತ ಶಿಕ್ಷಣ ಇಲಾಖೆಯ ಭಾಗವಾಗಿರುವ ವೃತ್ತಿ ಸುಧಾರಣೆ ಆಯ್ಕೆ ಸಮಿತಿಯ ತೀರ್ಮಾನದ ಮೇಲೆ ಈ ಹೆಜ್ಜೆ ಇಡಲಾಗುತ್ತಿದೆ ಎಂದಿದ್ದಾರೆ. ಯುಜಿಸಿ ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್ಗಳಾಗಿ ಬಡ್ತಿ ನೀಡಬಹುದೆಂದು 2010ರಲ್ಲೇ ಹೇಳಿದೆ. ಆದರೆ ಕಳೆದ 12 ವರ್ಷಗಳಿಂದ ಈ ವಿಚಾರದಲ್ಲಿ ಯಾವ ಪ್ರಗತಿಯೂ ಆಗಿರಲಿಲ್ಲ. ಈಗ ಸರಕಾರವು 274 ಅಸೋಸಿಯೇಟ್ ಪ್ರೊಫೆಸರುಗಳಿಗೆ ಬಡ್ತಿ ನೀಡಲು ಅಧಿಸೂಚನೆ ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.
Join The Telegram | Join The WhatsApp |