Join The Telegram | Join The WhatsApp |
ಶಿವಮೊಗ್ಗ:
ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ ಮಾಡಲಾಗಿದ್ದು, ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ ತಿಳಿಸಿದರು.
ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ-ಪಂಗಡಕ್ಕೆ ನಿಗದಿಪಡಿಸಿರುವ ಮೀಸಲನ್ನು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ ಅವರು, ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ ನಡೆಯಲಿದೆ ಎಂದರು.
ಹೊಸ ಶಿಕ್ಷಣ ನೀತಿ (ಎನ್ಇಪಿ)ಯನ್ನು ರಾಜ್ಯದ 300ರಿಂದ 400 ಆಯ್ದ ಶಾಲೆಗಳಲ್ಲಿ ಜನವರಿ 26ರಿಂದ ಜಾರಿಗೊಳಿಸಲು ಯೋಜಿಸಲಾಗಿದೆ. ಅದಕ್ಕೆ ಅಗತ್ಯವಿರುವ ಪಠ್ಯಕ್ರಮ ರೂಪುಗೊಂಡಿದೆ. ಎನ್ಇಪಿ ಚಟುವಟಿಕೆ ಆಧಾರಿತ ಶಿಕ್ಷಣವಾಗಿದೆ. ಪಠ್ಯಕ್ರಮಕ್ಕೆ ತಕ್ಕಂತೆ ಶಿಕ್ಷಕರಿಗೆ ತರಬೇತಿ ನೀಡಿ ಅವರನ್ನು ಸಿದ್ಧಪಡಿಸಲಾಗುವುದು ಎಂದು ಹೇಳಿದರು.
15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಚಾರ ಹೈಕೋರ್ಟ್ನಲ್ಲಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟು ಷರತ್ತಿನ ಮೇರೆಗೆ ನೇಮಕಾತಿ ಆದೇಶ ನೀಡಿ ಎಂಬುದು ಆಯ್ಕೆಯಾದ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಜನವರಿ 18ರಂದು ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅಲ್ಲಿನ ತೀರ್ಮಾನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Join The Telegram | Join The WhatsApp |