ಮಂಗಳೂರು: ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರದ ಅನಂತೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ ಸಂಭ್ರಮದಿಂದ ನಡೆಯುತ್ತಿದೆ.

ಪ್ರಾತಃಕಾಲ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿಗಳು ಪ್ರಾರಂಭಗೊಂಡವು. ದೇವರಿಗೆ ವಾಸುಕಿ ಪೂಜೆ, ದೇವಳದ ಮುಂಭಾಗದಲ್ಲಿರುವ ಅಶ್ವತ್ಥ ಕಟ್ಟೆಯಲ್ಲಿ ನಾಗದೇವರ ಶಿಲಾ ಪ್ರತಿಮೆಗಳಿಗೆ ಪಂಚಾಮೃತ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ನೆರವೇರಿತು. ಸಹಸ್ರಾರು ಭಕ್ತರು ಪೂಜೆ ಸಲ್ಲಿಸಿ ಪುನೀತರಾದರು.