ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಶುಭ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ ಕೋಶದ ನಿರ್ದೇಶಕರಾಗಿದ್ದ ಶುಭ ಅವರನ್ನು ಸರಕಾರ ನೇಮಕ ಮಾಡಿದೆ. ಇದುವರೆಗೆ ಎರಡು ಬಾರಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಕ್ರಿಯಾಶೀಲ ಅಧಿಕಾರಿ ಅಶೋಕ ದುಡಗುಂಟಿ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.