ಬೆಳಗಾವಿ : ಗುರುವಾರ ಸಂಜೆ ಸುರಿದ ಗುಡುಗು ಸಿಡಿಲಿನಿಂದ ಮಳೆಯಲ್ಲಿ ಸಿಡಿಲು ಬಡಿದು ಓರ್ವ ವ್ಯಕ್ತಿ ಹಾಗೂ ಹಲವು ಕುರಿಗಳು ಮೃತಪಟ್ಟಿವೆ. ಇಬ್ಬರು ವ್ಯಕ್ತಿಗಳು ಗಂಭೀರ ವಾಗಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಹೆಬ್ವಾಳ ಗ್ರಾಮದಲ್ಲಿ ನಡೆದಿದ್ದು, ಮಳೆ ಅಬ್ಬರಕ್ಕೆ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನದಿಯಂತೆ ಪರಿವರ್ತನೆ ಯಾಗಿದೆ.

ಗುರುವಾರ ಸಂಜೆ ಹುಕ್ಕೇರಿ ತಾಲೂಕಿನಲ್ಲಿ ಸುರಿದ ಗುಡುಗು ಮಿಂಚಿನ ಮಳೆಯಲ್ಲಿ ಸಿಡಲಿನ ಹೊಡೆತಕ್ಕೆ ಸಿಕ್ಕು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿಡಿಲಿನ ಹೊಡೆತಕ್ಕೆ ಕೆಲವು ಕುರಿಗಳು ಮೃತಪಟ್ಟಿರುವದು ವರದಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹುಕ್ಕೇರಿ ತಹಶಿಲ್ದಾರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಬಳಿಯ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರೆಯಲ್ಲಿ ಮಳೆಯ ನೀರು ಹರಿಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ ನದಿಯಂತೆ ಭಾಸವಾಗಿದೆ. ಇದರಿಂದ ಕೆಲಹೊತ್ತು ರಸ್ತೆ ಸಂಚಾರಕ್ಕು ಅಡಚಣೆ ಉಂಟಾಗಿದೆ ಎಂದು ತಿಳಿದು ಬಂದಿದೆ.