![](https://udayaprabha.com/wp-content/uploads/2024/02/IMG-20240218-WA0125.jpg)
ಬೆಳಗಾವಿ : ಖಾನಾಪುರ ತಾಲೂಕಿನ ಹಲಸಿವಾಡಿ ಗ್ರಾಮದ ಕೃಷಿ ಜಮೀನಿನಲ್ಲಿ ಚಿರತೆ ಮರಿ ಕಾಣಿಸಿಕೊಂಡಿದೆ.
ಜಮೀನಿನಲ್ಲಿ ರೈತರು ಕೃಷಿ ಕಾರ್ಯ ಕೈಗೊಂಡಿದ್ದಾಗ ಚಿರತೆ ಮರಿ ಜಮೀನಿನ ಒಂದು ಬದಿಯಿಂದ ಮತ್ತೊಂದು ಬದಿಗೆ ಹಾದುಹೋಗಿದೆ. ಜನವಸತಿ ಪ್ರದೇಶದ ಬಳಿ ಚಿರತೆ ಕಾಣಿಸಿಕೊಂಡ ಕಾರಣ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ.
ಚಿರತೆ ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದಿರಬಹುದು, ಈ ಘಟನೆ ಕುರಿತು ಪರಿಶೀಲಿಸುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.