Join The Telegram | Join The WhatsApp |
ಬೆಳಗಾವಿ :
ಸುವರ್ಣ ಸೌಧ ಇನ್ನು ಎರಡು ವಾರಗಳ ಕಾಲ ಜನನಿಬಿಡವಾಗಲಿದೆ. ಹತ್ತು ಹಲವು ಸಂಘಟನೆಗಳು ಅಧಿವೇಶದ ಕಾಲಕ್ಕೆ ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿವೆ. ಹೀಗಾಗಿ ಬೆಳಗಾವಿಯಲ್ಲಿನ್ನು 15 ದಿನಗಳ ಕಾಲ ಜನ ಜಾತ್ರೆಯೇ ಸೇರಲಿದೆ.
ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಸುವರ್ಣ ಸೌಧದ ಬಳಿ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ರವಾನಿಸಲಿವೆ. ಬೆಳಗಾವಿ ಅಧಿವೇಶನ ಎಂದರೆ ಪ್ರತಿಭಟನೆಗಳು ಪ್ರಮುಖವಾಗಿ ಎದ್ದು ಕಾಣಿಸುತ್ತಿವೆ. ಈ ಹಿಂದಿನ ಅಧಿವೇಶನದ ಸಂದರ್ಭದಲ್ಲಿ ಹಲವು ಪ್ರತಿಭಟನೆಗಳು ನಡೆದಿರುವ ನಿದರ್ಶನಗಳಿವೆ. ಈ ಬಾರಿಯೂ ಪ್ರತಿಭಟನೆಗೆ ಅವಕಾಶ ಕೋರಿ ವಿವಿಧ ಸಂಘಟನೆಗಳು ಜಿಲ್ಲಾಡಳಿತದ ಬಳಿ ತಮ್ಮ ಸಂಘಟನೆಗಳ ಹೆಸರನ್ನು ನೋಂದಾಯಿಸಿಕೊಂಡಿವೆ.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿ ಅವುಗಳನ್ನು ಸರಕಾರದ ಗಮನಕ್ಕೆ ತಂದು ತಮ್ಮ ಬಹುದಿನಗಳ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸಂಘಟನೆಗಳು ಇದೀಗ ಸಜ್ಜಾಗುತ್ತಿದ್ದು ಆಯಾ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿಯತ್ತ ಧಾವಿಸುತ್ತಿರುವುದು ವಿಶೇಷವಾಗಿದೆ. ಸಂಘಟನೆಗಳು ನಡೆಸುವ ಪ್ರತಿಭಟನೆಗೆ ಜಿಲ್ಲಾಡಳಿತ ಅತ್ಯಂತ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವುದು ಇನ್ನೊಂದು ವಿಶೇಷವಾಗಿದೆ.
Join The Telegram | Join The WhatsApp |