ಬೆಳಗಾವಿ: ಪೊಲೀಸ್ ಪೇದೆಯೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೈಲಹೊಂಗಲ ಪಟ್ಟಣದ ತಹಶಿಲ್ದಾರರ ಕಚೇರಿ ಆವರಣದಲ್ಲಿರುವ ಸಭಾಭವನದ ಬಳಿ ನಡೆದಿದೆ.
ಬಸನಗೌಡ ಗೌಡರ (40) ಎಂಬಾತ ನಿನ್ನೆ ತಡರಾತ್ರಿ ಮರಕ್ಕೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲೂಕಿನ ದೊಡವಾಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ಎನ್ನಲಾಗಿದೆ. ನಾಲ್ಕು ವರ್ಷದ ಹಿಂದೆ ಬೈಲಹೊಂಗಲ ಠಾಣೆಯಿಂದ ಅಥಣಿ ಠಾಣೆಗೆ ವರ್ಗವಾಗಿ ಈಗ ಕಳೆದ ಕೆಲ ತಿಂಗಳಿನಿಂದ ದೊಡವಾಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹಾಗೂ ಕೆಲ ದಿನಗಳಿಂದ ಗೈರುಹಾಜರಿಯಲ್ಲಿ ಇದ್ದ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬೈಲಹೊಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.