ದೆಹಲಿ: ಕಚ್ಚತೀವು ದ್ವೀಪವನ್ನು ನಿರ್ದಯವಾಗಿ ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್‌ ನಂಬಿಕೆಗೆ ಅರ್ಹವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮೋದಿ, ‘ಕಚ್ಚತೀವುವನ್ನು ಕಾಂಗ್ರೆಸ್ ಹೇಗೆ ನಿರ್ದಯವಾಗಿ ಶ್ರೀಲಂಕಾಗೆ ಬಿಟ್ಟುಕೊಟ್ಟಿತು ಎಂಬ ಹೊಸ ಸಂಗತಿಗಳನ್ನು ಈ ವರದಿ ಬಹಿರಂಗಪಡಿಸುತ್ತಿವೆ. ಇದು ಪ್ರತಿಯೊಬ್ಬ ಭಾರತೀಯನಿಗೆ ಕೋಪ ತರಿಸುತ್ತದೆ. ಎಂದಿಗೂ ಕಾಂಗ್ರೆಸ್‌ ಅನ್ನು ನಂಬಲು ಸಾಧ್ಯವಿಲ್ಲ’ ಎಂದರು.

‘ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸಿರುವುದೇ ಕಾಂಗ್ರೆಸ್‌ನ 75 ವರ್ಷದ ಸಾಧನೆ’ ಎಂದು ಹೇಳಿದರು.