ಚಿತ್ರದುರ್ಗ: ನಟ ದರ್ಶನ್ ಮತ್ತು ಅವರ ಗ್ಯಾಂಗಿನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾ ಸ್ವಾಮಿಗೆ ಗಂಡು ಮಗು ಜನನವಾಗಿದೆ. ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾ ಸ್ವಾಮಿ ಅವರ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾ ಸ್ವಾಮಿ ಕೊಲೆಯಾದ ವೇಳೆ ಪತ್ನಿ ಸಹನಾ ಗರ್ಭಿಣಿಯಾಗಿದ್ದರು. ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಸಹನಾ ಬುಧವಾರ ಬೆಳಗಿನ ಜಾವ ಐದು ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ. ಕೀರ್ತಿ ಆಸ್ಪತ್ರೆಯಿಂದ ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ್ದಾರೆ.