ಕಠ್ಮಂಡು : ನೇಪಾಳದ ರಾಜಧಾನಿ ಕಠ್ಮಂಡುವಿನ ತ್ರಿಭುವನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೌರ್ಯ ಏರ್ಲೈನ್ಸ್ ವಿಮಾನ ಟೇಕ್‌ ಆಫ್‌ ವೇಳೆ ಪತನವಾಗಿದೆ.

ವಿಮಾನ ಪತನಕ್ಕೆ ಏನು ಕಾರಣ ಹಾಗೂ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ ವರದಿ ಪ್ರಕಾರ ವಿಮಾನದಲ್ಲಿದ್ದ ಅಷ್ಟು ಜನ ಸಜೀವ ದಹನವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಪತನದ ವೇಳೆ ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿ 19 ಜನ ಇದ್ದರು ಎಂಬ ಪ್ರಾಥಮಿಕ ಮಾಹಿತಿ ಇದೆ. ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ವಿಮಾನ ಪೋಖರಾ ಎಂಬಲ್ಲಿಗೆ ತೆರೆಯುತ್ತಿತ್ತು. ಆ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪೈಲಟ್ ಬಚಾವ್: ಆದರೆ, ಸದ್ಯ ಬಂದಿರುವ ಮಾಹಿತಿ ಪ್ರಕಾರ ಪೈಲಟ್‌ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.