ಕಾರವಾರ: ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿಯ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ನದಿಯಲ್ಲಿ ಈಜಲು ಇಳಿದಿದ್ದ ವೇಳೆ ದುರಂತ ನಡೆಸಿದ್ದು, ಮೃತ ದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.

ಹುಬ್ಬಳ್ಳಿಯ ನಜೀರ್ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್(6), ರೇಷಾ ಉನ್ನಿಸಾ (38), ಇಫ್ರಾ‌ ಅಹ್ಮದ್ (15), ಅಬೀದ್ ಅಹ್ಮದ್(12) ಮೃತಪಟ್ಟಿದ್ದಾರೆ. ಮೃತರು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು. ಪ್ರವಾಸಕ್ಕೆಂದು ಅಕ್ವಾಡಕ್ಕೆ ಬಂದಿದ್ದ ವೇಳೆ ನದಿಯಲ್ಲಿ ಈಜಲು ಹೋಗಿದ್ದಾಗ ಮುಳುಗಿದ್ದಾರೆ.

ಎಂಟು ಮಂದಿ ನದಿಯಲ್ಲಿ ಈಜಲು ಹೋಗಿದ್ದರು. ಆದರೆ, ಈ ಪೈಕಿ ಆರು ಮಂದಿ ಮುಳುಗಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಆರು ಮಂದಿಯ ಮೃತ ದೇಹಗಳನ್ನು ಪೊಲೀಸರು ಹೊರತೆಗೆದು, ದಾಂಡೇಲಿ ಆಸ್ಪತ್ರೆಗೆ ರವಾನಿಸಿದ್ದಾರೆ.