ಬೆಳಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ಬೆಳ್ತಂಗಡಿ ಮೂಲದ ಶ್ರೀಮತಿ ದಯಾಶೀಲರವರು ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾ ದ ಡಾ. ಎಲ್ .ಎಚ್. ಮಂಜುನಾಥ ಮತ್ತು ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ, ಸದ್ರಿಯವರು ಸುಮಾರು 26 ವರ್ಷಗಳಿಂದ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಸೇವೆಯನ್ನು ನೀಡಿದವರಾಗಿದ್ದು ಅವರಿಗೆ ಯೋಜನಾ ಅನುಕೂಲಕ್ಕಾಗಿ ನಿರ್ಮಾಣವಾದ ಅಥಣಿ, ಬೆಳಗಾವಿ-2, ಚಿಕ್ಕೋಡಿ, ಬೆಳಗಾವಿ-1, ಧಾರವಾಡ, ಹಾವೇರಿ ಜಿಲ್ಲೆಗಳನ್ನು ಒಳಗೊಂಡ 36 ತಾಲೂಕು ಯೋಜನಾ ವ್ಯಾಪ್ತಿಯನ್ನೊಳಗೊಂಡಿದೆ. ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ ಸಾಲಿಯನ್ ಕೇಂದ್ರ ಕಚೇರಿ ಧರ್ಮಸ್ಥಳಕ್ಕೆ ವರ್ಗಾವಣೆಗೊಂಡಿದ್ದಾರೆ.