ಬೆಂಗಳೂರು : ತೀರ್ಥಹಳ್ಳಿ ತಹಶೀಲ್ದಾರ ಅವರು ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ತೀರ್ಥಹಳ್ಳಿ ತಹಶೀಲ್ದಾರ ಜಕ್ಕಣ್ಣ ಗೌಡರ್ (54) ಅವರು ನ್ಯಾಯಾಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗಾಂಧಿನಗರ ಬಳಿಯ ಲಾಡ್ಜ್​ ಒಂದರಲ್ಲಿ ತಂಗಿದ್ದರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ ಫೋನ್​ ಕರೆಗೆ ಯಾವುದೇ ಪ್ರತಿಕ್ರಿಯೆ ನೀಡಿದ ಕಾರಣ ಪೊಲೀಸರು ಹುಡುಕಾಟ ನಡೆಸಿದ್ದರು. ಮೊಬೈಲ್​ ಲೊಕೇಷನ್ ಚೆಕ್ ಮಾಡಿದಾಗ ಲಾಡ್ಜ್​​ನಲ್ಲಿ ಇರುವ ಕುರಿತು ಮಾಹಿತಿ ಲಭ್ಯವಾಗಿತ್ತು.ನಂತರ ಬಳಿಕ ಲಾಡ್ಜ್​ನ ರೂಂಗೆ ಹೋಗಿ ನೋಡಿದಾಗ ಜಕ್ಕಣ್ಣ ಗೌಡರ್ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಗದಗ ಜಿಲ್ಲೆಯವರಾದ ಜಕ್ಕಣ್ಣಗೌಡರು ತೀರ್ಥಹಳ್ಳಿಯಲ್ಲಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸದ್ಯ ಅವರ ಶವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಕಳೆದ ಒಂದು ವರ್ಷದಿಂದ ಜಕ್ಕಣ್ಣ ಗೌಡರ್​​ ತೀರ್ಥಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.