ಚಿಕ್ಕಮಗಳೂರು: ಪೋಷಕರ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಆಟವಾಡುವಾಗ ಏರ್​ ಗನ್ (Air Gun) ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಏರ್‌ ಗನ್‌ (Air Gun) ಇಟ್ಟುಕೊಂಡು ಆಟ ಆಡುವಾಗ ಬಾಲಕ ಟ್ರಿಗರ್‌ ಒತ್ತಿದ್ದಾನೆ. ಗನ್ ಮಿಸ್‌ ಫೈರ್‌ ಆಗಿ ಗುಂಡು ಬಾಲಕನ ದೇಹದೊಳಗೆ ಹೊಕ್ಕಿದೆ. 7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ.

ಕಾಫಿ ತೋಟದಲ್ಲಿ ಮಂಗಗಳನ್ನು ಓಡಿಸಲು ಬಳಸುವ ಏರ್ ಗನ್ ಜೊತೆ ವಿಷ್ಣು ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ವಿಷ್ಣು ಅಚಾನಕ್ ಆಗಿ ಟ್ರಿಗರ್​ ಒತ್ತಿದ್ದಾನೆ. ಪರಿಣಾಮ ಏರ್​ ಗನ್ ಫೈರ್ ಆಗಿದ್ದು, ನೇರವಾಗಿ ​ಗನ್​ನೊಳಗಿದ್ದ ಬಾಲ್ಸ್ ವಿಷ್ಣುವಿನ ಹೃದಯ ಭಾಗಕ್ಕೆ ಹೊಕ್ಕಿದೆ. ಪೋಷಕರು ಮನೆಯಲ್ಲಿ ಇದ್ದಾಗಲೇ ಈ ದುರ್ಘಟನೆ ಸಂಭವಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.