ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ.

ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ನಡೆದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಅವರ ಸಹೋದರನ ಮಗಳ ಮದುವೆಗೆ ಹೋಗಿದ್ದ ಸಿಎಂ ಅವರಿಗೆ ಚೆಕ್ ಪೋಸ್ಟ್ ನಲ್ಲಿ ಡಿಸಿ ಅಕ್ರಮ್ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರು ವಧು ವರರಿಗೆ ಶುಭಾಶಯ ಕೋರಿದ್ದಾರೆ.