ನವಲಗುಂದ :
ಮನೆಯವರೆಲ್ಲರೂ ಜಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ
ತಾಯಿಯೊಬ್ಬರು ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.

ಸಾವಿತ್ರಿ ಸರಕಾರ (32) ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡವರು. ಸುಮಾ(5) ಮತ್ತು ದರ್ಶನ್ (4)ತಾಯಿಯ ಕೈಯಿಂದಲೇ ಕೊಲೆಯಾದ ದುರ್ದೈವಿ ಮಕ್ಕಳು. ಮಕ್ಕಳನ್ನು ಕೊಂದ ಬಳಿಕ ಆಕೆ ತಾನೇ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ಗೊತ್ತಾಗಿಲ್ಲ.