ವಿಜಯಪುರ : ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆ ಜಲದಪ್ಪನ ಕೆರೆಯ ಬಳಿಯ ಜಮೀನಿನಲ್ಲಿ ಸಿಡಿಲು ಬಡಿದು ಕುರಿಗಾಯಿ ಬಾಲಕ ಭೀರಪ್ಪ ನಿಂಗಪ್ಪ ಅವರಾದಿ (16) ಎಂಬವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತ ಬಾಲಕನ ಕುಟುಂಬಸ್ಥರು 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಿಡಿಲು ಬಡಿದು ಮತ್ತೊಬ್ಬ ಸಾವು:
ಇಂಡಿ ತಾಲೂಕಿನ ಮಸಳಿ ಬಿ.ಕೆ‌.ಗ್ರಾಮದಲ್ಲಿ ಸಂಜೆ 5.30 ರ ಸುಮಾರಿಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರಿಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸೋಮಶೇಖರ ಪಟ್ಟಣಶೆಟ್ಟಿ (45) ಸಿಡಿಲಿಗೆ ಬಲಿಯಾದ ರೈತ ಎಂದು ಗುರುತಿಸಲಾಗಿದೆ.