ಉಡುಪಿ: ಕೊಂಕಣ ರೈಲ್ವೆ ನಿಗಮದ ಅಧಿಕಾರಿಗಳು ಇದೀಗ ಕರಾವಳಿ ಜನತೆಯ ಬೇಡಿಕೆಗೆ ಸ್ಪಂದಿಸಿದ್ದಾರೆ. ಮಂಗಳೂರು ಸೆಂಟ್ರಲ್ ಸ್ಟೇಷನ್ ನಿಂದ ಮಡಗಾಂವ ವರೆಗೆ ವಾರದಲ್ಲಿ ಆರು ದಿನ ಸಂಚರಿಸುವ ವಂದೇ ಭಾರತ್ ರೈಲು ಇನ್ನು ಮುಂದೆ ಉಡುಪಿ ಹಾಗೂ ಕಾರವಾರದಲ್ಲಿ ನಿಲುಗಡೆಯಾಗಲಿದೆ. ಪ್ರಯಾಣಿಕರ ಅನುಕೂಲ ಪರಿಗಣಿಸಿ ಕೆಲವು ಪ್ರಮುಖ ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲು ನಿಲುಗಡೆ ಮಾಡುವಂತೆ ಜನತೆ ಒತ್ತಾಯಿಸಿದ್ದರು. ದೇಶದಲ್ಲಿ ವಂದೇ ಭಾರತ್ ಅತೀ ವೇಗವಾಗಿ ಸಂಚರಿಸುವ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.