ಬೆಳಗಾವಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಮತದಾನದ ಜಾಗೃತಿ ಮೂಡಿಸುವ ಉದ್ದೇಶದಿಂದ ಏ.3 ರಂದು ಸಂಜೆ 5 ಗಂಟೆಗೆ ಚನ್ನಮ್ಮ ವೃತ್ತದಿಂದ ಕೃಷ್ಣದೇವರಾಯ ವೃತ್ತ, ಮಹಾನಗರ ಪಾಲಿಕೆಯವರೆಗೆ ಮಂಗಳಮುಖಿಯರಿಂದ ಮತದಾನದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.