ಬೆಂಗಳೂರು : ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಎದರಿಗೆ ಆಗಮಿಸಿದ ವ್ಯಕ್ತಿಯೊಬ್ಬ ಫೈಲ್‌ ಅನ್ನು ನ್ಯಾಯಾಧೀಶರ ಕೈಗಿಟ್ಟು ಹರಿತವಾದ ಸಣ್ಣ ಚಾಕುವಿನಿಂದ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ಘಟನೆ ನಡೆದಿದೆ. ಪ್ರಕರಣವೊಂದರ ವಿಚಾರಣೆಯ ಅಂತ್ಯದ ವೇಳೆಗೆ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಬಂದ ವ್ಯಕ್ತಿಯೊಬ್ಬ ತಮ್ಮ ಕೈಲಿದ್ದ ಕಡತವನ್ನು ಅಲ್ಲಿದ್ದ ನ್ಯಾಯಮೂರ್ತಿಗಳಿಗೆ ಕೊಡಲು ಮುಂದಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳು ವ್ಯಕ್ತಿಯ ಕೈಲಿದ್ದ ಫೈಲ್‌ ಪಡೆಯುಲು ಹಿಂದೇಟು ಹಾಕಿದ್ದಾರೆ. ಆಗ, ಪಕ್ಕದಲ್ಲಿದ್ದ ಇತರೆ ಕೋರ್ಟ್‌ ಸಿಬ್ಬಂದಿ ಪಡೆದುಕೊಳ್ಳಲು ಮುಂದಾಗಿದ್ದಾರೆ.

ಕೂಡಲೇ ತನ್ನ ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ ಹರಿತವಾದ ಸಣ್ಣ ಚಾಕುವಿನಂತಹ ವಸ್ತುವಿನಿಂದ ತನ್ನ ಗಂಟಲಿನ ಬಳಿ ಹಿಡಿದುಕೊಂಡು ನನಗೆ ನ್ಯಾಯ ಕೊಡಿಸಿ ಎಂದು ಕುತ್ತಿಗೆಯನ್ನು ಕೊಯ್ದುಕೊಂಡಿದ್ದಾರೆ. ಇದರಿಂದ ವಿಚಲಿತರಾದ ನ್ಯಾಯಮೂರ್ತಿಗಳು ಕೂಡಲೇ ಪೊಲೀಸರು ಹಾಗೂ ಭಧ್ರತಾ ಸಿಬ್ಬಂದಿಯನ್ನು ಕರೆದು ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಿಮಿ ಆಂಬ್ಯೂಲೆನ್ಸ್ ಕರೆಸಿ ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ.

ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರ ಮುಂದೆ ಕತ್ತು ಕೊಯ್ದುಕೊಂಡ ವ್ಯಕ್ತಿಯನ್ನು ಶ್ರೀನಿವಾಸ್ ಚಿನ್ನಂ ಎಂದು ಹೇಳಲಾಗಿದೆ. ಇವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ದೂರು ನೀಡಲು ಬಂದಿದ್ದರು. ಶ್ರೀನಿವಾಸ್ ಚಿನ್ನಂ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶ್ರೀನಿವಾಸ್ ಚಿನ್ನಂ ನೀಡಿದ್ದ ಪ್ರಕರಣ ಏಕಸದಸ್ಯ ಪೀಠದಲ್ಲಿ ರದ್ದಾಗಿತ್ತು. ಈ ಸಂಬಂಧ ಸಿಜೆ ಗೆ ದೂರು ನೀಡಲು ಬಂದಿದ್ದರು. ಹೈಕೋರ್ಟ್ ಹಾಲ್ ನಲ್ಲಿ ಸಿಬ್ಬಂದಿಗೆ ದೂರಿನ ಪ್ರತಿ ನೀಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನು ಪೊಲೀಸರು ಶ್ರೀನಿವಾಸ್ ಚಿನ್ನಂ ನೀಡಿದ್ದ ದೂರಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೂಡಲೇ ಪೊಲೀಸರು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕತ್ತು ಕುಯ್ದುಕೊಂಡಿದ್ದರಿಂದ ಅನ್ನನಾಳದ ಅಕ್ಕಪಕ್ಕದ ರಕ್ತನಾಳಗಳು ಕಟ್ ಆಗಿದೆ. ಪರಿಸ್ಥಿತಿ ಗಂಭೀರ ಹಿನ್ನೆಲೆ ವೈದ್ಯರು ಆಪರೇಷನ್ ನಡೆಸುತ್ತಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಯಾರು?
ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಹೆಸರು ಚಿನ್ನಂ ಶ್ರೀನಿವಾಸ್. ಮೂಲತಃ ಮೈಸೂರಿನ ವಿಜಯನಗರದ ನಿವಾಸಿ. ಸಿಜೆಗೆ ದೂರು ನೀಡಲು ಹೆಂಡತಿ ಜೊತೆ ಹೈಕೋರ್ಟ್‌ಗೆ ಬಂದಿದ್ದರು. ಆಪರೇಷನ್ ಥಿಯೇಟರ್‌ನಲ್ಲಿ ಬಳಸುವ ಚಾಕುವನ್ನು ಶ್ರೀನಿವಾಸ್ ತಂದಿದ್ದರು.

ಈ ಹಿಂದೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ಶ್ರೀನಿವಾಸ್ ಚಿನ್ನಂ ದೂರು ನೀಡಿದ್ದರು. ಪ್ರಕರಣ ಏಕಸದಸ್ಯ ಪೀಠದಲ್ಲಿ ರದ್ದಾಗಿತ್ತು. ಈ ಸಂಬಂಧ ಸಿಜೆಗೆ ದೂರು ನೀಡಲು ಬಂದಿದ್ದು, ಕೋರ್ಟ್ ಹಾಲ್​​ನಲ್ಲಿ ಸಿಬ್ಬಂದಿಗೆ ದೂರಿನ ಪ್ರತಿ ನೀಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಶ್ರೀನಿವಾಸ್ ಚಿನ್ನಂ ನೀಡಿದ್ದ ದೂರಿನ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

ಆತ್ಮಹತ್ಯೆಗೆ ಕಾರಣವೇನು?
ಅಪಾರ್ಟ್​ಮೆಂಟ್​ ನಿರ್ಮಿಸಿ ಲಾಭ ಹಂಚಿಕೊಳ್ಳುವ ವಿಚಾರವಾಗಿ ಶ್ರೀಧರ್ ರಾವ್ ಮತ್ತಿತರರೊಂದಿಗೆ ಒಪ್ಪಂದವಾಗಿತ್ತು. ಆದರೆ ಒಪ್ಪಂದ ಪಾಲಿಸದೇ 93 ಲಕ್ಷ ರೂ. ಪಡೆದು ವಂಚನೆ ಹಿನ್ನೆಲೆ ಶ್ರೀನಿವಾಸ್ ಚಿನ್ನಂ 2021ರಲ್ಲಿ ಮೈಸೂರಿನ ವಿಜಯನಗರ ಠಾಣೆಯಲ್ಲಿ ಕೇಸ್ ಒಂದನ್ನ ದಾಖಲಿಸಿದ್ದರು. ವಂಚನೆ ಜೊತೆಗೆ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದರು ಎಂದು ಎಫ್​ಐಆರ್​​ ಕೂಡ ದಾಖಲಾಗಿತ್ತು.

ಎಫ್ಐಆರ್ ಪ್ರಶ್ನಿಸಿ ಶ್ರೀಧರ್ ರಾವ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಿವಿಲ್ ವ್ಯಾಜ್ಯವಾಗಿರುವುದರಿಂದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ, ಸಿವಿಲ್ ಕೋರ್ಟ್‌ನಲ್ಲಿ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಸೂಚಿಸಿತ್ತು. ಹೀಗಾಗಿ ಸಿಜೆಗೆ ದೂರು ನೀಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 2023ರ ಜೂನ್ 2ರಂದೇ ಪ್ರಕರಣ ರದ್ದಾಗಿತ್ತು. ಆದರೆ ಈಗ ಆತ್ಮಹತ್ಯೆಗೆ ಯತ್ನಿಸುವ ಉದ್ದೇಶದ ಬಗ್ಗೆ ತನಿಖೆ ನಡೆಯುತ್ತಿದೆ.