ಆಂಧ್ರಪ್ರದೇಶದ ಬಿಜೆಪಿ ಮುಖ್ಯಸ್ಥೆ ದಗ್ಗುಬಾಟಿ ಪುರಂದೇಶ್ವರಿ ಲೋಕಸಭೆ ಸ್ಪೀಕರ್ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆಯೇ?ಸಾಂವಿಧಾನಿಕವಾಗಿ, ಹೊಸ ಲೋಕಸಭೆಯು ಮೊದಲ ಬಾರಿಗೆ ಸಭೆ ಸೇರುವ ಮೊದಲು ಸ್ಪೀಕರ್ ಸ್ಥಾನವು ಖಾಲಿಯಾಗುತ್ತದೆ. 18 ನೇ ಲೋಕಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಆಂಧ್ರ ಪ್ರದೇಶ ಬಿಜೆಪಿ ಮುಖ್ಯಸ್ಥೆ (ದಗ್ಗುನಟಿ ಪುರಂದೇಶ್ವರಿ) ಹೆಸರು ಸುತ್ತುತ್ತಿದೆ.  ಕಳೆದ ಎರಡು ಲೋಕಸಭೆಗಳಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಸುಮಿತ್ರಾ ಮಹಾಜನ್ ಮತ್ತು ಓಂ ಬಿರ್ಲಾ ಸ್ಪೀಕರ್ ಆಗಿದ್ದರು. 18ನೇ ಲೋಕಸಭಾ ಚುನಾವಣೆಯ ಅಂಕಿಅಂಶಗಳು ಹರಿದಾಡುತ್ತಿದ್ದಂತೆ, ಸರ್ಕಾರ ರಚಿಸಲು ಎರಡು ನಿಕಟ ಮಿತ್ರಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಅನ್ನು ಅವಲಂಬಿಸಬೇಕಾಗಿದೆ ಎಂದು ಭಾರತೀಯ ಜನತಾ ಪಕ್ಷವು ಅರ್ಥಮಾಡಿಕೊಂಡಿದೆ. ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷೆ ಮತ್ತು ರಾಜಮಂಡ್ರಿ ಸಂಸದೆ ದಗ್ಗುನಟಿ ಪುರಂದೇಶ್ವರಿ ಅವರು 18 ನೇ ಲೋಕಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಮುಂಚೂಣಿಯಲ್ಲಿರುವವರಲ್ಲಿ ಒಬ್ಬರು. ಮೂಲಗಳನ್ನು ಉಲ್ಲೇಖಿಸಿ, ವಿವಿಧ ಮಾಧ್ಯಮಗಳು ಅವರು ಪ್ರಮಾಣವಚನ ಸಮಾರಂಭದಿಂದ ಹೊರಗಿಡಲು ಕಾರಣ ಅವರನ್ನು ಲೋಕಸಭೆಯ ಸ್ಪೀಕರ್ ಆಗಿ ನೇಮಿಸಲು ಸಾಧ್ಯವಾಗಬಹುದೆಂದು ಊಹಿಸಲಾಗಿದೆ.

ನವದೆಹಲಿ : ಅಟಲ್ ಬಿಹಾರಿ ವಾಜಪೇಯಿ ಸರಕಾರದ ಅವಧಿಯಲ್ಲಿ ತೆಲಗುದೇಶಂನ ಟಿ.ಎಂ.ಸಿ. ಬಾಲಯೋಗಿಯವರಿಗೆ ಸ್ಪೀಕರ್ ಹುದ್ದೆ ನೀಡಲಾಗಿತ್ತು. ಇದೀಗ ಭಾರೀ ಬೇಡಿಕೆಯಲ್ಲಿರುವ ಲೋಕಸಭೆಯ ಸ್ಪೀಕರ್‌ ಹುದ್ದೆಯನ್ನೂ ತನ್ನಲ್ಲೇ ಉಳಿಸಿಕೊಳ್ಳಲು ಭರ್ಜರಿ ಬಾಣ ಪ್ರಯೋಗಿಸಿದ್ದು, ಅದು ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಲೋಕಸಭೆಯ ನೂತನ ಸ್ಪೀಕರ್‌ ಹುದ್ದೆಯನ್ನು ಹಾಲಿ ರಾಜಮಂಡಿ ಕ್ಷೇತ್ರದ ಸಂಸದೆ ಮತ್ತು ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷೆ ಡಿ.ಪುರಂದೇಶ್ವರಿಗೆ ನೀಡುವ ಸಾಧ್ಯತೆ ಇದೆ.

ಇಂಥದ್ದೊಂದು ಯೋಜನೆ ಮೂಲಕ ಬಿಜೆಪಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದೆ ಎಂದು ವಿಶ್ಲೇಷಿಸಲಾಗಿದೆ. ಸ್ಪೀಕರ್‌ ಹುದ್ದೆ ನೀಡುವಂತೆ ಟಿಡಿಪಿ, ಜೆಡಿಯು ಬೇಡಿಕೆ ಇಟ್ಟಿದ್ದವಾದರೂ ಅದನ್ನು ಬಿಡಲು ಬಿಜೆಪಿ ಸಿದ್ಧವಿರಲಿಲ್ಲ. ಹೀಗಾಗಿಯೇ ಕೌಟುಂಬಿಕ ಬಾಣ ಪ್ರಯೋಗಿಸುವ ಮೂಲಕ ಹುದ್ದೆಯನ್ನು ತನ್ನಲ್ಲೇ ಉಳಿಸಿಕೊಂಡು, ಟಿಡಿಪಿಯನ್ನೂ ಓಲೈಸುವ ಕೆಲಸ ಮಾಡಿದೆ. ಈ ಕಾರಣಕ್ಕಾಗಿಯೇ ಪುರಂದೇಶ್ವರಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿಲ್ಲ ಎನ್ನಲಾಗಿದೆ.

ಪುರಂದೇಶ್ವರಿ ಟಿಡಿಪಿ ಸಂಸ್ಥಾಪಕ ಎನ್‌.ಟಿ.ರಾಮರಾವ್‌ ಅವರ ಪುತ್ರಿ. ಪುರಂದೇಶ್ವರಿ ಅವರ ಸೋದರಿಯನ್ನೇ ಚಂದ್ರಬಾಬು ನಾಯ್ಡು ಮದುವೆಯಾಗಿರುವುದು. ಹೀಗಾಗಿ ಪುರಂದೇಶ್ವರಿ ಆಯ್ಕೆಯನ್ನು ನಾಯ್ಡು ವಿರೋಧಿಸುವುದಿಲ್ಲ. ಜೊತೆಗೆ ಹುದ್ದೆಯೂ ಬಿಜೆಪಿಯಲ್ಲೇ ಉಳಿಯುತ್ತದೆ ಎನ್ನುವುದು ಬಿಜೆಪಿ ತಂತ್ರ.

ಪುರಂದೇಶ್ವರಿ ಆಂಧ್ರಪ್ರದೇಶದಲ್ಲಿ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ಪಕ್ಷದ ನಡುವೆ ಸಮನ್ವಯ ಸಾಧಿಸಿ ಅಭೂತಪೂರ್ವ ಗೆಲುವು ಸಾಧಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಪುರಂದೇಶ್ವರಿ ನಾಯಕತ್ವದಲ್ಲಿ ಬಿಜೆಪಿ ಆಂಧ್ರಪ್ರದೇಶದಲ್ಲಿ ವಿಧಾನಸಭೆಯಲ್ಲಿ ಸ್ಪರ್ಧಿಸಿದ್ದ 10 ಸ್ಥಾನಗಳಲ್ಲಿ 8 ಗೆಲುವು ಕಂಡರೆ, ಲೋಕಸಭೆಯಲ್ಲಿ ಸ್ಪರ್ಧಿಸಿದ್ದ 6 ಸ್ಥಾನಗಳ ಪೈಕಿ ಮೂರರಲ್ಲಿ ಗೆಲುವು ಕಂಡಿದೆ.